ವಿಷಯಕ್ಕೆ ಹೋಗು

ಅಂಬಿಗರ ಚೌಡಯ್ಯ

ವಿಕಿಕೋಟ್ದಿಂದ
(ಅಂಬಿಗರ ಚೌಡಯ್ಯನ ವಚನ ಇಂದ ಪುನರ್ನಿರ್ದೇಶಿತ)

ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನ ಸಾಹಿತ್ಯ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ. ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು[] ಬರೆದಿರುವುದು ಗೋಚರಿಸುತ್ತದೆ.

ವಚನಗಳು

[ಸಂಪಾದಿಸಿ]

ಅಂತರಂಗವ ಬಿಟ್ಟು ಮಂಡೆ ಬೋಳಾದ ಮೇಲೆ
ಅಂಗಕೆ ಚೆಂದವುಂಟೆ ಚೆಂದ ಅಲಂಕಾರವುಂಟೆ
ತಮ್ಮಂಗದ ಸಂಗವನರಿಯದೆ ಭಂಡರನೇನೆಂಬೆನೆಂದಾತ
ನಮ್ಮ ದಿಟ್ಟ ವೀರಾಧಿವೀರ
ನಿಜ ಭಕ್ತ ಅಂಬಿಗರ ಚವುಡಯ್ಯನು.

ಅಂದಾದಿಬಿಂದುವಿನೊಳೊಂದಿದ ಹುಟ್ಟು,
ಆ ಹುಟ್ಟನೆ ಹಿಡಿದು ಅಂದ ಚೆಂದದಲ್ಲಿ ತೊಳಸಿ ಆಡುತ್ತೈದಾರೆ ಜಗವೆಲ್ಲಾ!
ಅಂದಗೆಟ್ಟವರೆಲ್ಲಾ ಬಂದೇರಿ ಹರುಗೋಲ,
ಒಂದೆ ಹುಟ್ಟಿನಲ್ಲಿಳುಹುವೆನೆಂದಾತನಂಬಿಗ ಚೌಡಯ್ಯ.

ಅಂಬಿಗನು ಜಗದೊಳಗೆ ಇಂಬಿಲೋಲಾಡುವನು;
ತುಂಬಿದ ಸಾಗರದೊಳಗೆ ನೋಡಯ್ಯ.
ನಿಂದ ದೋಣಿಯನೇರಿದಂದಿನ ಹುಟ್ಟ
ಕಂಡವರಂದವನರಿದಾತ ತೊಳಸುತ್ತಿದ್ದನು.

ಉಲ್ಲೇಖಗಳು

[ಸಂಪಾದಿಸಿ]
  • ಛಂದಗೆಟ್ಟವರೆಲ್ಲಾ ಬಂದೇರಿ ದೋಣಿಯನು ಶಿವನೊಂದೆ ಠಾವಿಗೊಯ್ದಿಳುಹುವೆನೆಂದನಂಬಿಗ ಚೌಡಯ್ಯ.

ಅಡವಿಯ ತೊಪ್ಪಲ ತರತರ ತಂದು ತಿಂದು
ಒಡಲ ದಂಡಿಸಿಕೊಂಡು,
ಪಡೆ, ಗವಿಯೊಳಗೆ ತಪಸ್ಸಿದ್ದೇವೆಯೆಂದು
ಕಡು ಹೆಮ್ಮೆಯಲ್ಲಿ ನುಡಿವ ಅಣ್ಣಗಳು ನೀವು ಕೇಳಿರೋ.
ಷಡುರಸಂಗಳು ಹುಟ್ಟಿದವು ಶಿವನ ಕರುಣರಸದಲ್ಲಿ,
ಆ ರುಚಿಗಳ ಸುಖಮಂ ಪಡೆದವುದಕ್ಕೆ
ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧಪದಾರ್ಥವ ಹಿಡಿದ ಭಕ್ತನ ಮನೆಯಲ್ಲಿ
ಗುರುಲಿಂಗಜಂಗಮಕ್ಕೆ ನೀಡಿ ಮಾಡುವ
ಭಕ್ತಿಪದಾರ್ಥವಾದ ಷಡುರುಚಿಯ ಕೊಂಬುದಕ್ಕೆ
ನಿಮ್ಮಲ್ಲಿಯೆ ಷಡ್ವಿಧಲಿಂಗಂಗಳುಂಟು.
ಅವ ನೋಡಿ ಎಚ್ಚತ್ತು ಸವಿಸವಿದರ್ಪಿಸಬಲ್ಲಡೆ ಮಹಾಮಹಿಮ,
ತಾನೇನ ಮಾಡಲು ಜಡನಲ್ಲ, ಅಜಡನು ತಾನೆಂದಾತನಂಬಿಗರ ಚೌಡಯ್ಯ.

ಬಾಹ್ಯ ಕೊಂಡಿಗಳು

[ಸಂಪಾದಿಸಿ]
w
w
ವಿಕಿಪೀಡಿಯದಲ್ಲಿ ಇದರ ಬಗ್ಗೆ ಒಂದು ಲೇಖನವಿದೆ: