ಕನಕದಾಸ
ಗೋಚರ
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರು|ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರು|ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.
ಯುಕ್ತಿಗಳು
[ಸಂಪಾದಿಸಿ]- ಕಾಲವಾವನ ಕೀಳು ಮಾಡದು?
- - ೦೬:೩೧, ೧೧ ಆಗಸ್ಟ್ ೨೦೧೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಹಿಂದೆ ನನ್ನ ಬೈದವರೆಲ್ಲ ಚೆಂದವಿರಲಿ, ಮುಂದೆ ನನ್ನ ಬೈದವರೆಲ್ಲ ಅಂದಣವೇರಲಿ, ಕಂದು ಇಟ್ಟವರೆಲ್ಲ ಕುದುರೆ ಕಟ್ಟಿ ಬಾಳಲಿ, ಬಂದು ಒದ್ದವರಿಗೆ ಭತ್ತದ ಗದ್ದೆ ಬೆಳೆಯಲಿ.
- ಅಜ್ಞನಿಗಳೊಡನೆ ಅಧಿಕ ಸ್ನೇಹಕ್ಕಿಂತ ಸುಜ್ಞಾನಿಗಳೊಡನೆ ಜಗಳವಾಡುವುದು ಲೇಸು.
- ದುರ್ಜನರ ಮನೆಯ ಪಾಯಸಾನ್ನಕಿಂತ ಸಜ್ಜನರ ಮನೆಯ ದಬ್ಬಾಳಿಕೆಗೆ ಲೇಸು ಹೆಜ್ಜೆಗೆ ಸಾವಿರ ಹೊನ್ನನಿತ್ತರೂ ಬೇಡ ಬಲು ದುರ್ಜನರ ಸಂಗ ಬಲು ಭಂಗ ಹರಿಯೆ.
- ತಾನಾರು ? ದೇಹವಾರು? ದಿವ್ಯಾ ಜ್ಞಾನದಲಿ ತಿಳಿದಾತ.ಪರಮಯೋಗಿ
ಕೃತಿಗಳು
[ಸಂಪಾದಿಸಿ]- ರಾಮಧಾನ್ಯ ಚರಿತ್ರೆ