ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿಇವರು ಕರ್ನಾಟಕದ ಒಬ್ಬರು ರಾಜಕಾರಣಿ. ಭಾರತೀಯ ಜನತಾ ಪಕ್ಷದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದಾರೆ. ಜುಲೈ೨೮, ೨೦೨೧ ರಂದು ಬಿ.ಎಸ್. ಯಡಿಯೂರಪ್ಪರವರ ನಂತರ ಬೊಮ್ಮಾಯಿ ಕರ್ನಾಟಕದ ೨೩ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ಮಾಜಿ ಸಿಎಂ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್. ಆರ್. ಬೊಮ್ಮಾಯಿ-ಗಂಗಮ್ಮ ಅವರ ಪುತ್ರ. ೧೯೬೦ ರ ಜ.೨೮ ರಂದು ಜನಿಸಿದ ಬೊಮ್ಮಾಯಿ ಬಿ.ವಿ ಬೊಮ್ಮರೆಡ್ಡಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಿಂದ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದ ಬೊಮ್ಮಾಯಿ ಮೂಲತಃ ವೃತ್ತಿಯಲ್ಲಿ ಕೃಷಿಕ ಮತ್ತು ಕೈಗಾರಿಕೋದ್ಯಮಿ. ನೀರಾವರಿ ಯೋಜನೆಗಳಲ್ಲಿ ಹಾಗೂ ನೀರಾವರಿ ವಿಷಯಗಳಲ್ಲಿ ಆಳವಾದ ಜ್ಞಾನ ಹೊಂದಿರುವ ಅವರು, ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಭಾರತದಲ್ಲೇ ಮೊದಲ ಶೇ.೧೦೦ ರಷ್ಟು ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೆ ತರುವುದು ಸೇರಿದಂತೆ ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದು ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.