ವಿಷಯಕ್ಕೆ ಹೋಗು

ರಾಘವಾಂಕ

ವಿಕಿಕೋಟ್ದಿಂದ

ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ)

ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ. ಈತನ ಜೀವನ ಹಾಗೂ ಕೃತಿಗಳು ಇವನ ಅನಂತರದ ಕೆಲವು ಕವಿಗಳಿಗೆ ಕುತೂಹಲದ, ಗೌರವದ ವಿಷಯಗಳಾಗಿದ್ದವು. ಕೃತಿಪಂಚಕಗಳನ್ನು ರಚಿಸಿ ಮರಳಿ ತನ್ನ ಹಲ್ಲುಗಳನ್ನು ಪಡೆದ.ಅನಂತರ ಹಂಪೆಗೆ ಬಂದು ಹರಿಹರನ ಆಜ್ಞಾನುಸಾರವಾಗಿ ಬೇಲೂರಿಗೆ ಹೋಗಿ ಅಲ್ಲಿ ಬಯಲಾದ. ಇದರಲ್ಲಿ ಐತಿಹಾಸಿಕತೆ ಹಾಗು ಸಾಂಕೇತಿಕತೆಗಳೆರಡೂ ಬೆರೆತಿವೆ. ರಾಘವಾಂಕ ಹರಿಹರನ ೧.ಹರಿಶ್ಚಂದ್ರ ಕಾವ್ಯ.[] ೨.ಸಿದ್ಧರಾಮ ಪುರಾಣ ೩.ಸೋಮನಾಥ ಚರಿತೆ ೪. ವೀರೇಶ ಚರಿತೆ ೫.ಶರಭ ಚರಿತೆ ೬.ಹರಿಹರ ಮಹತ್ವ

ಉಲ್ಲೇಖಗಳು

[ಸಂಪಾದಿಸಿ]
"https://kn.wikiquote.org/w/index.php?title=ರಾಘವಾಂಕ&oldid=12542" ಇಂದ ಪಡೆಯಲ್ಪಟ್ಟಿದೆ